ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಪಾರ್ಕ್: ಶಾಸಕ ಸುನಿಲ್‌ ಕುಮಾರ್

Update: 2024-05-04 16:11 GMT

ಕಾರ್ಕಳ: ತಾಲೂಕಿನ ಬೈಲೂರು ಸಮೀಪದ ಉಮಿಕ್ಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್‌ನ್ನು ಪ್ರವಾಸೋದ್ಯದ ಅಭಿವೃದ್ಧಿಗಾಗಿ ನಿರ್ಮಾಣ ಮಾಡಲಾಗಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ.ಸುನಿಲ್‌ ಕುಮಾರ್ ತಿಳಿಸಿದ್ದಾರೆ.

‘ಎಕ್ಸ್’ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುನಿಲ್‌ಕುಮಾರ್, ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸ್ಥಗಿತಗೊಳಿಸಲು ಕೆಲವು ಸ್ಥಾಪಿತ ಹಿತಾಸಕ್ತಿಗಳು ನಡೆಸಿದ ಷಡ್ಯಂತ್ರಕ್ಕೆ ಸೋಲಾಗಿದೆ. ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಒತ್ತಾಯಿ ಸುತ್ತೇನೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News