ಕಾರ್ಕಳ: ರಥೋತ್ಸವ; ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

Update: 2024-05-06 15:07 GMT

ಉಡುಪಿ, ಮೇ 6: ಕಾರ್ಕಳ ಶ್ರೀವೆಂಕಟರಮಣ ದೇವಸ್ಥಾನದಲ್ಲಿ ಮೇ 9 ರಿಂದ 14ರವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮೇ 13 ರಂದು ಸಂಜೆ 4 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್‌ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ,ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿದ್ದಾರೆ.

ಪರ್ಯಾಯ ಮಾರ್ಗದ ವಿವರ: ಘನವಾಹನಗಳು ಬಂಗ್ಲೆಗುಡ್ಡೆ- ಹಿರಿಯಂಗಡಿ-ಪುಲ್ಕೆರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ, ಮಾರ್ಕೆಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಮೂರು ಮಾರ್ಗದಲ್ಲಿ ಸಂಚರಿಸುವ ಲಘು ವಾಹನ ಮತ್ತು ದ್ವಿಚಕ್ರ ವಾಹನಗಳು ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News