ಯಕ್ಷಗಾನ ಕೇಂದ್ರದಲ್ಲಿ ವೇಷಭೂಷಣ, ಬಣ್ಣಗಾರಿಕೆ ತರಬೇತಿ ಶಿಬಿರ ಉದ್ಘಾಟನೆ

Update: 2024-05-07 15:19 GMT

ಉಡುಪಿ, ಮೇ 7: ಇಂದ್ರಾಳಿಯ ಯಕ್ಷಗಾನ ಕೇಂದ್ರದ ನೇತೃತ್ವದಲ್ಲಿ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ತರಬೇತಿ ಶಿಬಿರವನ್ನು ಮೇ 6ರಿಂದ 13ರವರೆಗೆ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಶಿಬಿರವನ್ನು ಯಕ್ಷಗಾನ ಕೇಂದ್ರದ ಸಲಹಾಸಮಿತಿ ಸದಸ್ಯರಾದ ವಿಶ್ವನಾಥ ಶೆಣೈ ಉದ್ಘಾಟಿಸಿದರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷರಾದ ಪಳ್ಳಿ ಕಿಶನ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಶಿಬಿರಾರ್ಥಿಗಳಿಗೆ ಶುಭಕೋರಿದರು.

ವೇದಿಕೆಯಲ್ಲಿ ಸಮಿತಿಯ ಸದಸ್ಯರಾದ ಭುವನಪ್ರಸಾದ್ ಹೆಗ್ಡೆ, ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು.

ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು. ಗುರು ಉಮೇಶ್ ಸುವರ್ಣರ ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶಿಬಿರದಲ್ಲಿ 25 ಮಂದಿ ಯಕ್ಷಗಾನ ಆಸಕ್ತರು ಭಾಗವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News