ನದಿಗೆ ಬಿದ್ದು ಯುವಕ ಮೃತ್ಯು

Update: 2024-05-07 15:58 GMT

ಕುಂದಾಪುರ, ಮೇ 7: ಬಾಯಾರಿಕೆಗೆ ನದಿಯ ನೀರು ಕುಡಿಯುವ ಹೋದ ಅಪರಿಚಿತ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮೇ 6ರಂದು ಸಂಜೆ ವೇಳೆ ಕಂದಾವರ ಗ್ರಾಮದ ಸಟ್ವಾಡಿ ಎಂಬಲ್ಲಿ ನಡೆದಿದೆ.

ಕಂದಾವರ ಪರಿಸರದಲ್ಲಿ ತಿರುಗಾಡಿಕೊಂಡಿದ್ದ ಸುಮಾರು 35 ಪ್ರಾಯದ ಅಪರಿಚಿತ ವ್ಯಕ್ತಿಯು ಸಟ್ವಾಡಿ ತಿರುವಿನಲ್ಲಿರುವ ನದಿಗೆ ಬಾಯಾರಿಕೆಗೆ ನೀರು ಕುಡಿಯಲು ಹೋದವನು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರ ವಾರಿಸುದಾ ರರು ಈವರೆಗೆ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News