ಕೆಎಸ್ಆರ್ಟಿಸಿ ಬಸ್ ಢಿಕ್ಕಿ: ಪಾದಚಾರಿ ಮಹಿಳೆ ಮೃತ್ಯು
Update: 2024-05-09 16:23 GMT
ಬೈಂದೂರು, ಮೇ 9: ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೇ 9ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಸುಶೀಲ ಚೌಕಿಮನೆ(52) ಎಂದು ಗುರುತಿಸಲಾಗಿದೆ. ಭಟ್ಕಳ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮಣ್ಣು ರಸ್ತೆಯಲ್ಲಿ ಕಿರಿ ಮಂಜೇಶ್ವರ ಕಡೆಯಿಂದ ಅರೆಹೊಳೆ ಬೈಪಾಸ್ ಕಡೆಗೆ ನಡೆದು ಕೊಂಡು ಹೋಗುತ್ತಿದ್ದ ಸುಶೀಲ ಚೌಕಿಮನೆಗೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.