ಅನುಮಾನಾಸ್ಪದ ವ್ಯಕ್ತಿಯ ಬಂಧನ
Update: 2024-05-25 21:06 IST
ಉಡುಪಿ, ಮೇ 25: ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಮೇ 24ರಂದು ಬೆಳಗಿನ ಜಾವ 4.45ರ ಸುಮಾರಿಗೆ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಬಾಗಲಕೋಟೆಯ ಲಕ್ಷ್ಮಣ(26) ಎಂಬಾತನನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.