ಮಣಿಪಾಲ: ಸಿಟಿ ಬಸ್ ಢಿಕ್ಕಿ; ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತ್ಯು
Update: 2024-05-29 18:57 IST
ಮಣಿಪಾಲ, ಮೇ 29: ಸಿಟಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರ ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಈಶ್ವರ ನಗರದ ನಿವಾಸಿ ಮಹಾಬಲ ಶೆಟ್ಟಿಗಾರ್(78) ಎಂದು ಗುರುತಿಸಲಾಗಿದೆ.
ಮಣಿಪಾಲದಿಂದ ಪರ್ಕಳ ಕಡೆ ಹೋಗುತ್ತಿದ್ದ ಬಸ್, ರಸ್ತೆ ದಾಟುತ್ತಿದ್ದ ಮಹಾಬಲ ಶೆಟ್ಟಿಗಾರ್ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.