ಹಾಲಾಡಿ: ವೃದ್ಧರು ನಾಪತ್ತೆ
Update: 2024-06-24 19:14 IST
ಉಡುಪಿ, ಜೂ.24: ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಜಮದಗ್ನಿ ನಿವಾಸಿ ಸಂಜೀವ ಶೆಟ್ಟಿ (73) ಎಂಬವರು ಜೂನ್ 22 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 6 ಇಂಚು ಎತ್ತರ, ಸಪೂರ ಸದೃಢಕಾಯ ಮೈಕಟ್ಟು, ಬಿಳಿ ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ: 9480805456, 8277988963 ಅಥವಾ ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 08254-230880 ಮತ್ತು ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದು ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.