×
Ad

ಬಸ್ಸಿಗೆ ಢಿಕ್ಕಿ: ನಜ್ಜುಗುಜ್ಜಾದ ಶೋರೂಮ್‌ಗೆ ತೆರಳುತಿದ್ದ ಹೊಸ ಫಾರ್ಚೂನರ್ ಕಾರು

Update: 2024-06-27 21:58 IST

ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಕೊಂಡೊಯ್ಯುತಿದ್ದ ಹೊಸ ಫಾರ್ಚೂನರ್ ಕಾರನ್ನು ಅದರ ಚಾಲಕ ನಿಲ್ಲಿಸಿದ ಬಸ್‌ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ ಹೊಸ ಫಾರ್ಚೂನರ್ ರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರನ್ನು ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂಗೆ ಚಾಲಕ ಕೊಂಡೊಯ್ಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಉಡುಪಿ ಸಮೀಪದ ನಿಟ್ಟೂರು ಬಳಿ ಬರುತಿದ್ದಂತೆ ಕಾರು ಚಾಲಕ ತೀರಾ ನಿರ್ಲಕ್ಷ್ಯದಿಂದ, ರಸ್ತೆ ಬದಿ ಪ್ರಯಾಣಿಕರನ್ನು ಹತ್ತಿ ಸಲು ನಿಲ್ಲಿಸಿದ್ದ ಬಸ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ.ಘಟನೆ ಬಳಿಕ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಕಾರು ಶೋರೂಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News