ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
Update: 2024-06-29 21:41 IST
ಉಡುಪಿ, ಜೂ.29: ಅನಾರೋಗ್ಯದಿಂದ ಬಳಲುತ್ತಿದ್ದ ಕುತ್ಪಾಡಿ ಗ್ರಾಮದ ಶ್ಯಾಮಲ(51) ಎಂಬವರು ಜೂ.28ರಂದು ಸಂಜೆ ವೇಳೆ ಮನೆಯ ಅಡುಗೆ ಕೋಣೆಯಲ್ಲಿ ಸೀರೆಯನ್ನು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ವೈಯಕ್ತಿಕ ಕಾರಣದಿಂದ ಮನನೊಂದ ಸೂಡಾ ಗ್ರಾಮದ ಬುಟ್ಟಿಮಾರ್ ಕಟ್ಟಿಯಂಗಡಿ ನಿವಾಸಿ ಸುರೇಶ(50) ಎಂಬವರು ಜೂ.29 ರಂದು ಮಧ್ಯಾಹ್ನ ಮನೆ ಬಳಿಯ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.