×
Ad

ಕೃಷಿ ಪ್ರಶಸ್ತಿ: ಅರ್ಜಿ ಆಹ್ವಾನ

Update: 2024-07-27 19:26 IST

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗಿದ್ದು, ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರ ದಲ್ಲಿ ಸ್ವತಃ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಈ ಕೆ.ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿ ಗಳೊಂದಿಗೆ ಎಫ್.ಐ.ಡಿ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು.

ಅಗತ್ಯ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News