×
Ad

ಉಡುಪಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ

Update: 2024-09-24 19:46 IST

ಉಡುಪಿ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪಿನ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿ ಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಮಂಗಳವಾರ ಧರಣಿ ನಡೆಸಲಾಯಿತು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನಾಡಿನ ಜನತೆ ಬಗ್ಗೆ ಗೌರವ ಇದ್ದರೆ ಪ್ರಜಾಪ್ರಭುತ್ವದ ಬಗ್ಗೆ ವಿಶ್ವಾಸ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಈ ಮೂಲಕ ದೇಶದಲ್ಲಿ ರಾಜ್ಯದ ಗೌರವ ಉಳಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ಧರಣಿಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮುಖಂಡ ರಾದ ದಿನಕರ ಶೆಟ್ಟಿ ಹೆರ್ಗ, ಶ್ರೀಶ ನಾಯಕ್, ವಿಜಯ ಕೊಡವೂರು, ದಿನೇಶ್ ಅಮೀನ್, ಶ್ರೀನಿಧಿ ಹೆಗ್ಡೆ, ಶ್ಯಾಮಲಾ ಕುಂದರ್, ರಾಜೇಶ್ ಕಾವೇರಿ, ನಯನ ಗಣೇಶ್, ರೇಷ್ಮಾ ಉದಯ ಶೆಟ್ಟಿ, ಶಿಲ್ಪಾ ಸುವರ್ಣ, ಸಂಧ್ಯಾ ರಮೇಶ್ ಮೊದಲಾ ದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News