×
Ad

ಗುಜರಿ ವ್ಯಾಪಾರಿಗೆ ವಂಚನೆ: ಪ್ರಕರಣ ದಾಖಲು

Update: 2024-09-28 21:15 IST

ಉಡುಪಿ, ಸೆ.28: ಆನ್‌ಲೈನ್ ಮೂಲಕ ಗುಜರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಲೆವೂರಿನ ರಾಮ ಎಂಬವರಿಗೆ ಸೆ.26ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಗುಜರಿಗೆ ಬ್ಯಾಟರಿಗಳಿವೆ ಎಂದು ಹೇಳಿದ್ದರು. ಇವರು ಕೆಜಿಗೆ 85ರೂ.ನಂತೆ ಮಾತುಕತೆ ನಡೆಸಿದ್ದರು. ಮುಂಗಡವಾಗಿ 50,000ರೂ. ಹಣವನ್ನು ನೀಡಲು ಅಪರಿಚಿತ ವ್ಯಕ್ತಿ ತಿಳಿಸಿದ್ದು ರಾಮ 25,000ರೂ. ಹಣವನ್ನು ಆನ್‌ಲೈನ್ ಮೂಲಕ ಪಾವತಿಸಿದ್ದರು. ಬಳಿಕ ಆ ವ್ಯಕ್ತಿ ಮೊಬೈಲ್ ಪೋನ್ ಸ್ವಿಚ್ ಆಫ್ ಮಾಡಿ ವಂಚನೆ ಮಾಡಿದ್ದಾನೆ ಎಂದು ದೂರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News