×
Ad

ಗೂಡ್ಸ್ ವಾಹನ ಢಿಕ್ಕಿ: ತಮಿಳುನಾಡಿನ ಕಾರ್ಮಿಕ ಮೃತ್ಯು

Update: 2024-10-26 21:15 IST

ಅಜೆಕಾರು, ಅ.26: ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡು ಮೂಲದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಅ.26ರಂದು ಬೆಳಗ್ಗೆ ಗುಡ್ಡೆಯಂಗಡಿ ಜಂಕ್ಷನ್ ಎಂಬಲ್ಲಿ ನಡೆದಿದೆ.

ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಆಸೈತಂಬಿಕೊಂಡನ್ ಎಂದು ಗುರುತಿಸಲಾಗಿದೆ. ಇವರು ಗೋಬರ್ ಗ್ಯಾಸ್ ಗುಂಡಿ ತೆಗೆಯುವ ಕೆಲಸ ಮಾಡಿಕೊಂಡಿದ್ದು, ಗುಡ್ಡೆಯಂಗಡಿ ಜಂಕ್ಷನ್‌ನಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಅಜೆಕಾರು ಕಡೆಯಿಂದ ಕಾಡುಹೊಳೆ ಕಡೆಗೆ ಹೋಗುತ್ತಿದ್ದ ಗೂಡ್ಸ್ ವಾಹನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿ ನಿಂತಿದ್ದ ಆಸೈತಂಬಿಕೊಂಡನ್‌ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಕಾರ್ಕಳ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News