×
Ad

ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Update: 2024-11-28 20:37 IST

ಹೆಬ್ರಿ: ಮರಕ್ಕೆ ಹತ್ತಿ ಕಾಳು ಮೆಣಸು ಕೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನ.27ರಂದು ಬೆಳಗ್ಗೆ 11.30ರ ಸುಮಾರಿಗೆ ಕಬ್ಬಿನಾಲೆ ಗ್ರಾಮದ ಹೊನ್ನ ಕೊಪ್ಪಲು ಮನೆ ಎಂಬಲ್ಲಿನಡೆದಿದೆ.

ಮೃತರನ್ನು ಕಬ್ಬಿನಾಲೆ ಹೊನ್ನ ಕೊಪ್ಪಲು ನಿವಾಸಿ ಜ್ಞಾನೇಶ್ವರ(61) ಎಂದು ಗುರುತಿಸಲಾಗಿದೆ. ಕೃಷಿ ಕೆಲಸ ಮಾಡಿ ಕೊಂಡಿದ್ದ ಇವರು, ತೋಟದಲ್ಲಿನ ಮರಕ್ಕೆ ಏಣಿಯಿಂದ ಹತ್ತಿ ಕಾಳು ಮೇಣಸು ಕೊಯ್ಯೂವಾಗ ಆಯತಪ್ಪಿ ಕೆಳಗೆ ಬಿದ್ದರೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News