×
Ad

ಕೊಡಂಕೂರು: ಸೇತುವೆ -ರಸ್ತೆ ಕಾಮಗಾರಿಗೆ ಚಾಲನೆ

Update: 2025-01-07 18:06 IST

ಉಡುಪಿ: ಉಡುಪಿ ನಗರಸಭೆಯ ಕೊಡಂಕೂರು ವಾರ್ಡಿನ ನೆರೆಪೀಡಿತ ತಾರಕಟ್ಟ ಪ್ರದೇಶದಲ್ಲಿ ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಳೆದ ಹಲವು ದಶಕಗಳ ಸ್ಥಳೀಯರ ಬೇಡಿಕೆಯಂತೆ ಕರ್ನಾಟಕ ನೀರಾವರಿ ನಿಗಮದ ಮೂಲಕ ೨.೫೦ ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಿ, ಸಂಪರ್ಕ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದ್ದು, ಮಳೆಗಾಲದಲ್ಲಿ ನೀರು ಸರಾಗ ಹರಿದು ನೆರೆ ಸೃಷ್ಟಿಯಾಗುವ ಸಮಸ್ಯೆ ಪರಿಹಾರವಾಗಲಿದೆ. ನೂತನ ರಸ್ತೆ ಕೊಡಂಕೂರಿನಿಂದ ಮೂಡಬೆಟ್ಟು ಭಾಗಕ್ಕೆ ನೇರ ಸಂಪರ್ಕ ಕಲ್ಪಿಸಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಗರಸಭಾ ಸದಸ್ಯ ರಾದ ಸಂಪಾವತಿ, ಹರೀಶ್ ಶೆಟ್ಟಿ, ಟಿ.ಜಿ.ಹೆಗ್ಡೆ, ಸವಿತಾ ಹರೀಶ್‌ರಾಮ್, ಪಕ್ಷದ ಪ್ರಮುಖರಾದ ಹರೀಶ್ ರಾಮ್, ಸಂದೀಪ್ ಕೋಟ್ಯಾನ್, ರಾಜೇಶ್, ಜಯಕರ ಪಾಲನ್, ಪ್ರಶಾಂತ್ ಪೂಜಾರಿ, ಶಿವರಾಜ ಕರ್ಕೇರ, ಸ್ಥಳೀಯ ಮುಖಂಡರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News