×
Ad

ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ

Update: 2025-01-20 20:43 IST

ಕಾರ್ಕಳ, ಜ.20: ವಿದ್ಯಾಭ್ಯಾಸ ಕಷ್ಟವಾಗುತ್ತಿದೆ ಎಂದು ಹೇಳಿ ಎಂಬಿಎ ವಿದ್ಯಾರ್ಥಿಯೋವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.19ರಂದು ರಾತ್ರಿ ಕಾರ್ಕಳದಲ್ಲಿ ನಡೆದಿದೆ.

ಮೃತರನ್ನು ಕಾರ್ಕಳದ ಕೆ.ಸುಧಾಕರ ಎಂಬವರ ಮಗ ಕೆ.ವೆಂಕಟೇಶ(22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಇವರು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿರುವ ಬಗ್ಗೆ ತಂದೆಯನ್ನು ಹೇಳುತ್ತಿದ್ದನು.

ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಅವರು ಮನೆಯ ಹಿಂದುಗಡೆ ಇರುವ ಬಾವಿಗೆ ಹಾರಿ ಆತ್ನಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News