×
Ad

ಕುಂದಾಪುರ| ಅಕ್ರಮವಾಗಿ ಕೆಂಪುಕಲ್ಲು ಬಂಡೆಗಳ ಸ್ಫೋಟ: ಇಬ್ಬರು ಆರೋಪಿಗಳ ಬಂಧನ

Update: 2025-02-01 22:23 IST

ಅನಂತಮೂರ್ತಿ ಭಟ್, ಪ್ರವೀಣ್

ಕುಂದಾಪುರ, ಫೆ.1: ಬೈಂದೂರು ತಾಲೂಕು ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಹೊಳೆ ಗ್ರಾಮದ ಅರಮನೆಕೊಡ್ಲು ಎಂಬಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಬಂಡೆಗಳನ್ನು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅನಂತಮೂರ್ತಿ ಭಟ್ ಹಾಗೂ ಸಹಕರಿಸಿದ ಪ್ರವೀಣ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅನಂತಮೂರ್ತಿ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಕಲ್ಲು ಬಂಡೆಗಳನ್ನು ಸ್ಫೋಟಿಸಿದ್ದು ಸಮೀಪದ ಮನೆ ಗಳಿಗೆ ಹಾನಿಯಾದ ಬಗ್ಗೆ ದೂರಲಾಗಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಸುಮೋಟೋ ಅಪರಾಧ ಪ್ರಕರಣ ದಾಖಲಾಗಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದಾಗ ಸ್ಫೋಟಕ್ಕೆ ಬಳಸಿದ ಪರಿಕರಗಳು ಕಂಡುಬಂದಿದ್ದವು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟ ನಡೆಸಿದ ಜಾಗದ ಮಾಲಕ ಅನಂತಮೂರ್ತಿ, ಆತನಿಗೆ ಸಹಕರಿಸಿದ ಪ್ರವೀಣ್‌ನನ್ನು ಶಂಕರನಾರಾಯಣ ಪೊಲೀಸ್ ಠಾಣೆ ಪಿಎಸ್‌ಐ ನಾಸಿರ್ ಹುಸೇನ್ ಹಾಗೂ ಸಿಬ್ಬಂದಿ ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಪ್ರಕರಣ ತನಿಖೆಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News