×
Ad

ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ಧಿ ತರಬೇತಿ

Update: 2025-02-13 20:52 IST

ಉಡುಪಿ, ಫೆ.13: ಪ್ರವಾಸೋದ್ಯಮ ಇಲಾಖೆ ಪ್ರಸಕ್ತ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ದಿಮೆದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆ ಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ.ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ ನಾಲ್ವರು ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ ಮೂವರು ಅಭ್ಯರ್ಥಿಗಳ ಗುರಿಯನ್ನು ನಿಗದಿಪಡಿಸಲಾಗಿದೆ. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಜಿಲ್ಲೆಯಲ್ಲಿ ಈ ತರಬೇತಿ ಪಡೆಯಲು ಎಸೆಸೆಲ್ಸಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷ ವಯೋಮಿತಿಯೊಳಗಿನ ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಫೆಬ್ರವರಿ 25ರ ಒಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868ಅನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News