ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ
ಕಾರ್ಕಳ : ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಜನ್ಮ ಜಯಂತಿಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುಧಾಕರ ದಾನಶಾಲೆ ಮಾತನಾಡಿ, ಅಂಬೇಡ್ಕರ್ ಸಂವಿಧಾನ ರಚನೆಯ ಜೊತೆಗೆ ಹಲವಾರು ಆಧುನಿಕ ಯೋಜನೆಗಳಿಗೆ ನಾಂದಿ ಹಾಡಿದ್ದಾರೆ. ಅದಕ್ಕೆ ಒಂದು ಸಣ್ಣ ಉದಾಹರಣೆ ವಿದ್ಯುತ್ ಇಲಾಖೆಯಿಂದ ಮನೆ ಮನೆ ವಿತರಣೆಯಾಗುವ ಬಿಲ್. ವಿದ್ಯುತ್ ಬಿಲ್ ನೀಡುವ ಈ ಕಲ್ಪನೆಯನ್ನು ದೇಶಕ್ಕೆ ಕೊಟ್ಟವರು ಅಂಬೇಡ್ಕರ ಅವರು. ಸಮಾನತೆಗಾಗಿ ಹೋರಾಡಿದ ಅಂಬೇಡ್ಕರ್ ಅವರ ವಿರುದ್ದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರವನ್ನು ಮಾಡುತ್ತಿರುವುದು ಖೇದಕರ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ ಸರ್ವರಿಗೂ ಸಮಬಾಳು ಸಮಪಾಲು ನೀಡುವ ಧ್ಯೇಯೊದ್ದೇಶದಿಂದ ರಚಿತವಾದ ಭಾರತದ ಸಂವಿಧಾನದ ನಿಜವಾದ ಆಶಯಗಳು ಇಂದು ಈಡೇರುತ್ತಿಲ್ಲ, ಸಂವಿಧಾನಕ್ಕೆ ವಿರುದ್ಧವಾಗಿ ಜಾತಿ ಅಸಮಾನತೆಗಳು ವಿವಿಧ ರೂಪದಲ್ಲಿ ನಿರಂತರವಾಗಿ ಮುಂದುವರುಯುತ್ತಿರುವುದು ಬೇಸರದ ಸಂಗತಿಯಾಗಿದೆ, ಎಲ್ಲರನ್ನೂ ಸಮಾನವಾಗಿ ಕಾಣುವ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸ ಮಾಡೋಣ ಎಂದು ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರ ವಕೀಲ ರಹ್ಮತುಲ್ಲಾ ಮಾತನಾಡಿ ಸಂವಿಧಾನವನ್ನು ಕಾನೂನಿನ ಮೂಲಕ ಭಾರತದಲ್ಲಿ ಅನುಷ್ಠಾನಗೊಳಿಸುವಲ್ಲಿ ಅಂಬೇಡ್ಕರ್ ಪಾತ್ರ ಪ್ರಧಾನವಾಗಿದ ಎಂದರು.
ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ಪ್ರತಿಮಾ ರಾಣೆ, ವಿವೇಕಾನಂದ ಶೆಣೈ, ಸುನೀತಾ ಶೆಟ್ಟಿ, ಅಶ್ಫಾಕ್ ಅಹ್ಮದ್, ಕಾಂಗ್ರೆಸ್ ಮುಖಂಡರಾದ ಪ್ರಭಾಕರ ಬಂಗೇರ, ಪುರಸಭಾ ಮಾಜಿ ಅಧ್ಯಕ್ಷ ಸುಭಿತ್ ಎನ್.ಆರ್., ಪ್ರಭಾ ಕಿಶೋರ್, ಮೀನುಗಾರ ಘಟಕದ ಅದ್ಯಕ್ಷ ಮುರಳಿ ರಾಣೆ ಮಾರ್ಕೆಟ್, ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ರುಕ್ಮಯ ಶೆಟ್ಟಿಗಾರ್, ಸುದರ್ಶನ್ ಬಂಗೇರ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೋಗಿ ಮುಂತಾದವರು ಉಪಸ್ಥಿತರಿದ್ದರು.
ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಸ್ವಾಗತಿಸಿದರು. ನಾಗೇಶ ಆಚಾರ್ಯ ಬೆಳ್ಮಣ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಅಕ್ರಮ ಸಕ್ರಮ ಸಮಿತಿಯ ರಮೇಶ್ ಬೆಜಕಳ ಧ್ಯೆಯ ಗೀತೆಯನ್ನು ಹಾಡಿದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ವಂದಿಸಿದರು.