×
Ad

ಉಡುಪಿ ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ

Update: 2025-04-25 20:54 IST

ಉಡುಪಿ, ಎ.25: ಜಿಲ್ಲಾ ಮಟ್ಟದಲ್ಲಿ ಮೇ 12ರಂದು ನಡೆಯಲಿರುವ ಭಗವಾನ್ ಬುದ್ಧ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವ್ಯವಸ್ಥಿತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿ ಯಲ್ಲಿ ನಡೆದ ಭಗವಾನ್ ಬುದ್ಧ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಬುದ್ಧ ಜಯಂತಿ ಕಾರ್ಯಕ್ರಮ ಮೇ 12ರಂದು ಬೆಳಗ್ಗೆ 10:15ಕ್ಕೆ ಆದಿ ಉಡುಪಿಯ ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಸಭಾ ಕಾರ್ಯಕ್ರಮ ಕ್ಕೂ ಮುನ್ನ ಬುದ್ಧವಂದನೆ ನಡೆಯಲಿದೆ. ಇದನ್ನು ಶಿಸ್ತುಬದ್ಧವಾಗಿ ನಡೆಸಲು ಅಗತ್ಯವಿರುವ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಬುದ್ಧರ ಜೀವನ ಚರಿತ್ರೆ ಕುರಿತು ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಏರ್ಪಡಿಸ ಲಾಗುವುದು. ಬುದ್ಧ ಕುರಿತು ಏರ್ಪಡಿಸುವ ವಿವಿಧ ಸ್ಫರ್ಧೆಗಳ ವಿಜೇತರಿಗೆ ಇದೇ ಸಂದರ್ಭದಲ್ಲಿ ಬಹುಮಾನವನ್ನು ಸಹ ವಿತರಿಸಲಾಗುವುದು ಎಂದ ತಿಳಿಸಿದರು.

ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News