ಮನೆಗೆ ನುಗ್ಗಿ ಚಿನ್ನಾಭರಣ ಕಳವು: ಪ್ರಕರಣ ದಾಖಲು
Update: 2025-05-16 21:15 IST
ಸಾಂದರ್ಭಿಕ ಚಿತ್ರ
ಕಾರ್ಕಳ, ಮೇ 16: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವು ಮಾಡಿರುವ ಘಟನೆ ಮುಂಡ್ಕೂರು ಗ್ರಾಮದ ದಡ್ಡು ಎಂಬಲ್ಲಿ ಮೇ 15ರಂದು ರಾತ್ರಿ ವೇಳೆ ನಡೆದಿದೆ.
ಶ್ರೀಮತಿ ಎಂಬವರ ಮನೆಯ ಕಿಟಿಕಿಯ ಮೂಲಕ ಮನೆಯ ಹಿಂದಿನ ಬಾಗಿಲಿನ ಚಿಲಕವನ್ನು ತೆರೆದು ಒಳಪ್ರವೇಶಿಸಿದ ಕಳ್ಳರು, ಕಪಾಟಿನಲ್ಲಿದ್ದ ಒಟ್ಟು 92 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.