ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ
Update: 2025-05-17 20:21 IST
ಶಿರ್ವ, ಮೇ 17: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕದ ವತಿಯಿಂದ ವರ್ಷಂಪ್ರತಿಯಂತೆ ಕಾಪು ಕಂದಾಯ ತಾಲೂಕು ವ್ಯಾಪ್ತಿಯಲ್ಲಿ ಬರುವ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ 2024-25ನೇ ಸಾಲಿನ ಎಸ್ಎಸ್ಎಲ್ಸಿ/ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ಪಾಠದಲ್ಲಿ ಪೂರ್ಣ ಅಂಕ(125/125)ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರದೊಂದಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.
ಅರ್ಹ ವಿದ್ಯಾರ್ಥಿಗಳು ಆಯಾ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ದೃಢೀಕರಣ ಪತ್ರದೊಂದಿಗೆ ಮಾರ್ಕ್ಸಕಾರ್ಡ್ ಇದರ ನಕಲು ಪ್ರತಿಯನ್ನು (ಕೃಷ್ಣಕುಮಾರ್ ರಾವ್ ಮಟ್ಟು, ಸಹಕಾರ್ಯದರ್ಶಿಗಳು, ಕಸಾಪ ಕಾಪು ತಾಲೂಕು ಘಟಕ,ಮಟ್ಟು ದೇವಸ್ಥಾನದ ಬಳಿ. ಅಂಚೆ.ಕಟಪಾಡಿ -574105. ಮೊಬೈಲ್: 8317461478) ಇವರಿಗೆ ಜೂನ್ 5ರ ಒಳಗೆ ಕಳುಹಿಸಬೇಕಾಗಿ ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.