×
Ad

ಅಂಗನವಾಡಿ ಕಾರ್ಯಕರ್ತೆಯಾಗಿದ್ದ ಮಹಿಳೆ ಆತ್ಮಹತ್ಯೆ

Update: 2025-06-13 22:15 IST

ಮಲ್ಪೆ, ಜೂ.13: ತಿಂಗಳ ಹಿಂದೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ರಾಜೀನಾಮೆ ನೀಡಿದ್ದ ಮಹಿಳೆ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುತೋನ್ಸೆ ಗ್ರಾಮದ ಪಡುಕುದ್ರು ಎಂಬಲ್ಲಿ ಜೂ.12ರಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಪಡುಕುದ್ರು ನಿವಾಸಿ ರಾಜು ಎಂಬವರು ಮಗಳು ಪ್ರತಿಮಾ (29) ಎಂದು ಗುರುತಿಸಲಾಗಿದೆ. ವಿಪರೀತ ಬೆನ್ನು ನೋವಿನಿಂದ ಪಡುಕುದ್ರು ಅಂಗನವಾಡಿಗೆ ರಾಜೀನಾಮೆ ನೀಡಿದ್ದ ಇವರು, ಮಾನಸಿಕ ಖಿನ್ನತೆಗೆ ಒಳಗಾಗಿ ಮನೆಯ ಕೊಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News