ನಗರಾಭಿವೃದ್ಧಿ ಪ್ರಾಧಿಕಾರದ ಸಮಸ್ಯೆ: ಬೇಡಿಕೆಗಳ ಬಗ್ಗೆ ಜಂಟಿ ನಿರ್ದೇಶಕರಿಗೆ ಮನವಿ
ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳ ಮತ್ತು ಬೇಡಿಕೆಗಳ ಕುರಿತ ಮನವಿ ಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದ ಅಧ್ಯಕ್ಷ ಸದಾಶಿವ ಉಳ್ಳಾಲ್ ನೇತೃತ್ವದ ನಿಯೋಗ ಸೋಮವಾರ ನಗರ ಮತ್ತು ಗ್ರಾಮಾಂತರ ಯೋಜನೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ಡಾ.ಪಂಕಜ ಎಂ.ಎಸ್. ಅವರನ್ನು ಭೇಟಿಯಾಗಿ ಸಲ್ಲಿಸಿತು.
ಭಿನ್ನವಾದ ಬೌಗೋಳಿಕ ಹಿನ್ನಲೆ ಹೊಂದಿರುವ ದ.ಕ., ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯನ್ನೊಳ ಗೊಂಡ ಕರಾವಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರಚಿಸಬೇಕು. ಹಾಲಿ ಇರುವ ನಗರ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಲಯ ನಿಯಮಾವಳಿಗಳು ಕರಾವಳಿ ಪ್ರದೇಶದಲ್ಲಿ ಅನುಷ್ಟಾನ ಗೊಳಿಸು ವುದು ಕಷ್ಟಸಾಧ್ಯವಾಗಿದೆ ಎಂದು ನಿಯೋಗ ಮನವರಿಕೆ ಮಾಡಿಸಿತು.
ನಿಯೋಗದಲ್ಲಿ ಒಕ್ಕೂಟದ ಸಂಚಾಲಕರುಗಳಾದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ್ ಹೇರೂರು, ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಫ, ಮೂಡಬಿದ್ರಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹರ್ಷವರ್ಧನ ಜೈನ್, ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ತ, ವಿವಿಧ ಪ್ರಾಧಿಕಾರದ ಸದಸ್ಯರುಗಳಾದ ಸತೀಶ್ ಭಂಡಾರಿ, ಶೇಖರ್ ಬೊಳ್ಳಿ ಇನ್ನಿತರರು ಮತ್ತು ಹಿರಿಯ ಉಪ ನಿರ್ದೇಶಕ ಹನುಮಂತ ರಾಯಪ್ಪಮೊದಲಾದವರು ಉಪಸ್ಥಿತರಿದ್ದರು.