ಕೂಲಿ ಕೆಲಸಕ್ಕೆ ತೆರಳಿದ ವ್ಯಕ್ತಿ ನಾಪತ್ತೆ
Update: 2025-08-04 21:16 IST
ಉಡುಪಿ, ಆ.4: ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ ಕೊಕ್ಕರ್ಣೆ ಕೆಳಪೇಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಸುರೇಂದ್ರ ನಾಯ್ಕ(36) ಎಂಬವರು ಜೂ.28ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ಈವರೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.