×
Ad

ಆನ್‌ಲೈನ್ ವಂಚನೆ: ಪ್ರಕರಣ ದಾಖಲು

Update: 2024-09-02 21:24 IST

ಉಡುಪಿ, ಸೆ.2: ಶೇರು ಮಾರುಕಟ್ಟೆ ಹಾಗೂ ಲಾಭಾಂಶಗಳ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಬೈಲಕೆರೆಯ ಅಬ್ದುಲ್ ರಹೀಮಾನ್ ಸಾಹೇಬ್(67) ಎಂಬವರು ಅಪರಿಚಿತ ವ್ಯಕ್ತಿ ನೀಡಿದ ಮಾಹಿತಿಯನ್ನು ನಂಬಿ ಷೇರ್‌ಮಾರುಕಟ್ಟೆ ಹಾಗೂ ಹೆಚ್ಚಿನ ಲಾಭಾಂಶಕ್ಕಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಜು.24ರಿಂದ ಆ.26ರ ತನಕ ಹಂತ ಹಂತ ವಾಗಿ ಒಟ್ಟು 16,10,000ರೂ. ಹಣವನ್ನು ಡಿಪಾಸಿಟ್ ಮಾಡಿದ್ದರು. ತದನಂತರ ಆರೋಪಿಗಳು ರಹಿಮಾನ್ ಅವರಿಗೆ ಹೂಡಿಕೆ ಮಾಡಿದ ಹಣ ಅಥವಾ ಲಾಭಾಂಶವನ್ನಾಗಲಿ ನೀಡದೇ ನಂಬಿಸಿ, ಮೋಸ ಮಾಡಿರುವುದಾಗಿ ದೂರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News