×
Ad

ಪಡುಬಿದ್ರಿ: ಸ್ಕೂಟರ್ ಗೆ ಬಸ್ ಢಿಕ್ಕಿ; ಯುವಕ ಮೃತ್ಯು

Update: 2024-01-08 15:11 IST

ಪಡುಬಿದ್ರಿ: ಸ್ಕೂಟರ್ ಗೆ ಬಸ್ ಢಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಪಡುಬಿದ್ರಿ ಸರ್ಕಲ್‌ನಲ್ಲಿ ರವಿವಾರ ತಡರಾತ್ರಿ ಸಂಭವಿಸಿದೆ.

ಮೃತ ಯುವಕನನ್ನು ಪಲಿಮಾರು ದರ್ಕಾಸ್ ನಿವಾಸಿ ಧನ್ ರಾಜ್ (17) ಎಂದು ಗುರುತಿಸಲಾಗಿದೆ.  

ಪಲಿಮಾರಿನಿಂದ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ನಾಟಕ ನೋಡಲು ತೆರಳುತ್ತಿದ್ದಾಗ, ಕಾರ್ಕಳ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ  ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸು ಢಿಕ್ಕಿಯಾಗಿ ಘಟನೆ ನಡೆದಿದೆ. 

ಸಹಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಧನ್‌ರಾಜ್‌ ನನ್ನು ಮುಕ್ಕದ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ‌

ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News