×
Ad

ಕುಂದಾಪುರ ಶಾಸಕರ ನಿಧಿಯಿಂದ ಪೊಲೀಸ್ ಜೀಪ್ ಹಸ್ತಾಂತರ

Update: 2026-01-05 17:34 IST

ಉಡುಪಿ, ಜ.5: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಮ್ಮ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪ್‌ನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಒದಗಿಸಿದ್ದಾರೆ.

ಸೋಮವಾರ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ಜೀಪಿನ ಕೀಯನ್ನು ಹಸ್ತಾಂತರಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ಡಿಎಆರ್ ಪೊಲೀಸ್ ಉಪಾಧೀಕ್ಷಕ ತಿಮ್ಮಪ್ಪ ಗೌಡ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕ ರವಿ ಕುಮಾರ್, ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಹಾಯಕ ಆಡಳಿತ ಅಧಿಕಾರಿ ಗೋಪಾಲ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News