ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
Update: 2025-07-28 20:54 IST
ಮಲ್ಪೆ, ಜು.28: ವೈಯಕ್ತಿಕ ಕಾರಣದಿಂದ ಮನನೊಂದ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಳಾರ್ಕಳಬೆಟ್ಟು ಎಂಬಲ್ಲಿ ಜು.27ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಕೆಳಾರ್ಕಳಬೆಟ್ಟುವಿನ ಜಯಂತಿ ಎಸ್. ಎಂಬವರ ಮಗ ಸ್ವಸ್ತಿಕ್ (16) ಎಂದು ಗುರುತಿಸಲಾ ಗಿದೆ. ಉಡುಪಿಯ ಜ್ಞಾನ ಸುಧಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಇವರು, ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಕಿಟಕಿಗೆ ಬೆಲ್ಟ್ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.