ಉಡುಪಿ ಜಾಮಿಯ ಮಸೀದಿಯಲ್ಲಿ ಗಣರಾಜ್ಯೋತ್ಸವ ಆಚರಣೆ
Update: 2025-01-26 15:20 IST
ಉಡುಪಿ, ಜ.26: ಉಡುಪಿ ಜಾಮಿಯ ಮಸೀದಿಯ ಆವರಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮಸೀದಿಯ ಉಪಾಧ್ಯಕ್ಷ ವಿ.ಎಸ್.ಉಮರ್ ಧ್ವಜಾರೋಹಣ ನೆರವೇರಿಸಿದರು. ಮಸೀದಿಯ ಖತೀಬ್ ಮೌಲಾನ ಅಬ್ದುಲ್ ರಶೀದ್ ನದ್ವಿ ಸಂದೇಶ ನೀಡಿದರು.
ಮಸೀದಿಯ ಕಾರ್ಯದರ್ಶಿ ಖಾಲಿದ್ ಅಬ್ದುಲ್ ಅಝೀಝ್, ಖಜಾಂಜಿ ಶಾಹಿದ್ ಅಲಿ, ಸಮಿತಿ ಸದಸ್ಯರಾದ ಮುನೀರ್ ಮಹಮ್ಮದ್, ಫಯಾಜ್, ಇಫ್ತಿಕರ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಜಮಾತ್ ಸದಸ್ಯರು, ಮುಸಲ್ಲಿಗಳು, ಮದ್ರಸದ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಮಸೀದಿಯ ಮೋಹಸಿನ್ ಯೂನಸ್ ಸ್ವಾಗತಿಸಿ, ವಂದಿಸಿದರು.