×
Ad

ಬಸ್ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

Update: 2025-11-10 21:28 IST

ಕಾರ್ಕಳ, ನ.10: ಬಸ್ಸೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬೆಳ್ಮಣ್ ಗ್ರಾಮದ ಜಂತ್ರ ಎಂಬಲ್ಲಿ ನಡೆದಿದೆ.

ಮೃತರನ್ನು ಕಾರ್ಕಳ ಕುಂಟಲ್ಪಾಡಿಯ ರೋಬರ್ಟ್ ಜೋಸೆಫ್ ಟೆಲ್ಲಿಸ್ (68) ಎಂದು ಗುರುತಿಸಲಾಗಿದೆ. ಇವರು ನ.9ರಂದು ಸಂಜೆ ಶಿರ್ವ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿರುವಾಗ ಬೆಳ್ಮಣ್ ಕಡೆಯಿಂದ ಶಿರ್ವ ಕಡೆಗೆ ಬರುತ್ತಿದ್ದ ಬಸ್, ಬೇರೊಂದು ವಾಹನವನ್ನು ಓವರ್ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ರೋಬರ್ಟ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡರೆನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಅವರು ನ.10ರಂದು ನಸುಕಿನ ವೇಳೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News