×
Ad

ಮಣಿಪಾಲ| ಗಾಂಜಾ ಸೇವನೆ ಆರೋಪ: ಏಳು ವಿದ್ಯಾರ್ಥಿಗಳು ವಶಕ್ಕೆ

Update: 2024-05-24 20:45 IST

ಮಣಿಪಾಲ: ಇಲ್ಲಿಗೆ ಸಮೀಪದ ಈಶ್ವರ್ ನಗರ ಎಂಬಲ್ಲಿ ಮೇ 20ರಂದು ಗಾಂಜಾ ಸೇವನೆಗೆ ಸಂಬಂಧಿಸಿ ಒಟ್ಟು ಏಳು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಂಜಾ ಸೇವನೆ ಮಾಡುತ್ತಿದ್ದ ಶಾಂತರಾಮ(20), ಸುಜಯ್(21), ರಾಫೆಲ್(21), ಸಿದ್ದಾರ್ಥ(21), ರಾಜದೀಪ(22), ವಿ.ಕ್ರಿಶ್(20), ಗಂಗಮ್ ವಾಣಿಶ್ರೀ (20) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ಪರೀಕ್ಷೆ ನಡೆಸಿದ ವೈದ್ಯರು ಇವರೆಲ್ಲ ಗಾಂಜಾ ಸೇವನೆ ದೃಢಪಟ್ಟಿರುವುದಾಗಿ ವರದಿ ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News