ಸೇವಾ ಮನೋಭಾವ ರೆಡ್ಕ್ರಾಸ್ನ ಧ್ಯೇಯ: ಬಿ.ರಾಜೀವ್ ಶೆಟ್ಟಿ
ಉಡುಪಿ: ಯುವ ಜನತೆಯಲ್ಲಿ ಸೇವಾ ಮನೋಭಾವವನ್ನು ರೂಪಿಸುವುದು ಯುುವ ರೆಡ್ಕ್ರಾಸಿನ ಉದ್ದೇಶವಾಗಿದ್ದು, ಇದರಿಂದಾಗಿ ಭಾರತೀಯ ರೆಡ್ಕ್ರಾಸ್ ಸಂಸ್ಥೆಯು ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾಗಿ ೪ ಬಾರಿ ನೋಬೆಲ್ ಪ್ರಶಸ್ತಿ ಪಡೆದ ಸಂಸ್ಥೆಯಾಗಿದೆ ಎಂದು ರೆಡ್ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದ್ದಾರೆ.
ಶಿರ್ವ ಸೈಂಟ್ಮೆರಿಸ್ ಕಾಲೇಜಿನ ರೆಡ್ಕ್ರಾಸ್ ಘಟಕದ ವರ್ಷದ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಉಡುಪಿಯಲ್ಲಿ ಕಳೆದ 20 ವರ್ಷಗಳಿಂದ ರೆಡ್ಕ್ರಾಸ್ ಸಂಸ್ಥೆಯು ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಾ ವಿಕಲಚೇತನರ ಪುನರ್ವಸತಿ ಕೇಂದ್ರದ ಮೂಲಕ ವಿಕಲಚೇತನರನ್ನು ಗುರುತಿಸಿ ಅವರಿಗೆ ಬೇಕಾದ ಸಾಧನ ಸಲಕರಣೆ ಗಳು ಮತ್ತು ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಗಳನ್ನು ನೀಡುತ್ತಾ ಬಂದಿದೆ. ಕಾಲೇಜುಗಳಲ್ಲಿ ಯುವ ರೆಡ್ಕ್ರಾಸ್ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಯುವ ರೆಡ್ಕ್ರಾಸ್ ಘಟಕಗಳನ್ನು ಪ್ರಾರಂಭಿಸಲಾದೆ ಎಂದವರು ನುಡಿದರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಸಮಾಜ ಸೇವೆ ಯಲ್ಲಿ ಯುವಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ವತಿಯಿಂದ ಕಾಲೇಜಿನ ಯುವ ರೆಡ್ಕ್ರಾಸ್ ಘಟಕಗಳ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ, ರಕ್ತದಾನ, ವಿಪತ್ತು ನಿರ್ವಹಣೆ, ಕ್ಯಾನ್ಸರ್ ತಪಾಸಣಾ ಮಾಹಿತಿ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್ ವಹಿಸಿದ್ದರು. ರೆಡ್ಕ್ರಾಸ್ ಕಾರ್ಯಕ್ರಮ ಅಧಿಕಾರಿ ಸಂಗೀತ ಹೆಚ್ ಪೂಜಾರಿ, ಪ್ರಾಧ್ಯಾಪಕ ವಿಠ್ಠಲ್ ನಾಯಕ್, ಯುವ ರೆಡ್ಕ್ರಾಸ್ ಮುಖಂಡ ಪ್ರಿಲ್ಸನ್ ಸ್ಯಾಮುವಲ್ ನೊರೊನ್ನ ಮತ್ತು ಐಕ್ಯೂಎಸಿ ಕೋ-ಅರ್ಡಿನೇಟರ್ ಜಗದೀಶ್ ಆಚಾರ್ಯ ಉಪಸ್ಥಿತರಿದ್ದರು.