×
Ad

ಕುಂದಾಪುರ: ರಾಜ್ಯಮಟ್ಟದ ಅಂತರ್‌ಕಾಲೇಜು ಸ್ಪರ್ಧೆ ‘ನವೋನ್ಮೇಶ’ ಉದ್ಘಾಟನೆ

Update: 2025-11-07 18:04 IST

ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ಇನ್ಸ್ಟಿಟ್ಯೂಶನ್ಸ್ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ನವೋನ್ಮೇಶ -2025’ ಉದ್ಘಾಟನಾ ಸಮಾರಂಭ ಕಾಲೇಜಿನಲ್ಲಿ ನಡೆಯಿತು.

ಸ್ಪರ್ಧೆಯನ್ನು ಉದ್ಘಾಟಿಸಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮಕ್ಕಳು ವಿದ್ಯೆ ಜೊತೆ ಉತ್ತಮ ಸಂಸ್ಕಾರ ಅಳವಡಿಸಿ ಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಕರಾವಳಿಯ ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಅಕಾಡಮಿಕ್ ನಿರ್ದೇಶಕ ಡಾ.ಎಸ್.ಎನ್.ಭಟ್ ವಹಿಸಿದ್ದರು. ಐಎಂಜೆಐಎಸ್‌ಸಿ ಪ್ರಾಂಶು ಪಾಲೆ ಡಾ.ಪ್ರತಿಭಾ ಪಾಟೀಲ್ ನವೋನ್ಮೇಶ್ 2025 ಸ್ಪರ್ದೆಯ ರೂಪುರೇಷೆಗಳನ್ನು ವಿವರಿಸಿದರು.

ಅಲೈಡ್ ಹೆಲ್ಥ್ ಸೈನ್ಸ್ ಡೀನ್ ಡಾ.ಪದ್ಮಚರಣ್ ಹಾಗೂ ಅಲೈಡ್ ಸೈನ್ಸ್ ಪ್ರಾಂಶುಪಾಲೆ ಪ್ರೊ.ಹೇಮಲತ, ಎಲ್ಲಾ ಕಾಲೇಜಿನ ವಿದ್ಯಾರ್ಥಿ ಮುಖಂಡರುಗಳು ಉಪಸ್ಥಿತರಿದ್ದರು. ಎಂಐಟಿಕೆ ಪ್ರಾಂಶುಪಾಲ ಡಾ.ರಾಮಕೃಷ್ಣ ಹೆಗ್ಡೆ ಸ್ವಾಗತಿಸಿದರು. ಎಂಸಿಎನ್ ಪ್ರಾಂಶುಪಾಲೆ ಪ್ರೊ.ಜೆನಿಫರ್ ಫ್ರೀಡಾ ಮೆನೇಜಸ್ ವಂದಿಸಿದರು.

ಡಾಟಾ ಸೈನ್ಸ್ ವಿಭಾಗದ ಮುಖ್ಯಸ್ಥರು ಪ್ರೊ.ಕಾರ್ತಿಕೇಯನ್ ಸಂಸ್ಥೆಯ ಪರಿಚಯ ನೀಡಿದರು. ಪ್ರೊ.ಸೂಕ್ಷ್ಮ ಅಡಿಗ ಹಾಗೂ ಕಾಮರ್ಸ್ ವಿಭಾಗದ ಮುಖ್ಯಸ್ಥೆ ಪ್ರೊ.ಅರ್ಚನ ಉಪಧ್ಯಾಯ ಅತಿಥಿ ಪರಿಚಯ ಮಾಡಿದರು. ವಿದ್ಯಾರ್ಥಿನಿ ಶಾಂಭವಿ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಪಿಯು ಕಾಲೇಜಿನ 1200ಕ್ಕೂ ಅಧಿಕ ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News