×
Ad

24ನೆ ದಿನವೂ ಮುಂದುವರೆದ ಕೊರಗರ ಅಹೋರಾತ್ರಿ ಧರಣಿ: ವ್ಯಾಪಾಕ ಬೆಂಬಲ

Update: 2026-01-07 20:26 IST

ಉಡುಪಿ, ಜ.7: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳಲಾಗಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 24ನೆ ದಿನವಾದ ಬುಧವಾರವೂ ಮುಂದುವರೆದಿದೆ.

ಧರಣಿ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಯನ್ನು ವಿವರವಾಗಿ ಪಡೆದುಕೊಂಡು, ತಮ್ಮ ಬೆಂಬಲವನ್ನು ಸೂಚಿಸಿದರು. ಇವರೊಂದಿಗೆ ಜಿಲ್ಲಾ ಜೆಡಿಎಸ್ ಕಾರ್ಯದರ್ಶಿ ಕಾಪು ಜಯರಾಮ ಆಚಾರ್ಯ ಹಾಜರಿದ್ದರು.

ಅದೇ ರೀತಿ ಪುರಾತತ್ವ ವಿದ್ವಾಂಸ ಪ್ರೊ.ಟಿ.ಮುರುಗೇಶಿ ಭೇಟಿ ನೀಡಿ ಸಮುದಾಯದ ಅಹವಾಲುಗಳನ್ನು ಸ್ವೀಕರಿಸಿ ದರು. ಧರಣಿಯಲ್ಲಿ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ಸಂಯೋಜಕ ಪುತ್ರನ್ ಹೆಬ್ರಿ, ಒಕ್ಕೂಟದ ಮಾಜಿ ಉಪಾಧ್ಯಕ್ಷ ಶೇಖರ ಕೆಂಜೂರು, ಭಾರತಿ ಎಲ್ಲೂರು, ಶಕುಂತಲಾ ನೇಜಾರು, ಸಂಜೀವ ಬಾರ್ಕೂರು, ಪ್ರವೀಣ್ ಹೆಬ್ರಿ, ಸುನೀತಾ ಅಡ್ವೆ, ಸುಪ್ರಿಯಾ ಎಸ್. ಕಿನ್ನಿಗೋಳಿ, ರಾಜೇಶ್ವರಿ ಬಂಡಿಮಠ, ಶಿವರಾಜ್ ಬಂಡಸಾಲೆ, ನಾಗು ನಾಡ, ನರಸಿಂಹ ಪೆರ್ಡೂರು, ಶೀನ ಬೆಳ್ಮಣ್ ಮೊದಲಾದವರು ಉಪಸ್ಥಿತರಿದ್ದರು.

ಎಸ್‌ಐಓ ಬೆಂಬಲ: ಕೊರಗ ಸಮುದಾಯದ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಎಸ್‌ಐಓ ವಿದ್ಯಾರ್ಥಿ ಸಂಘಟನೆಯ ಉಡುಪಿ ಜಿಲ್ಲಾ ತಂಡವು ಭೇಟಿ ನೀಡಿತು.

ಹೋರಾಟಗಾರರ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಗಮನದಿಂದ ಆಲಿಸಿದ ನಿಯೋಗ, ಅವರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತು. ಈ ಸಂದರ್ಭದಲ್ಲಿ ಎಸ್‌ಐಓ ಉಡುಪಿ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ, ಜಿಲ್ಲಾಕಾರ್ಯದರ್ಶಿಗಳಾದ ಸಮೀರ್ ತೀರ್ಥಹಳ್ಳಿ, ಅಫ್ಷಾನ್ ನವಾಜ್, ಕಾರ್ಯಕರ್ತರಾದ ಮುಝಯಿನ್, ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News