ಯುವಕ ನಾಪತ್ತೆ
Update: 2025-12-31 21:48 IST
ಉಡುಪಿ, ಡಿ.31: ಕೂಲಿ ಕೆಲಸ ಮಾಡಿಕೊಂಡಿದ್ದ ಉದ್ಯಾವರ ಗ್ರಾಮದ ನಿವಾಸಿ ಲಕ್ಷ್ಮಣ ಛಲವಾದಿ (23) ಎಂಬವರು ನ.23ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 1 ಇಂಚು ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ. ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಮೊ.ನಂ: 9480805431 ಹಾಗೂ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820- 2551033, ಮೊ.ನಂ: 9480805449 ಅನ್ನು ಸಂಪರ್ಕಿಸ ಬಹುದು ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.