ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ಕಳವು
Update: 2023-10-28 21:28 IST
ಉಡುಪಿ, ಅ.28: ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.
ಉಡುಪಿಯ ನಾರಾಯಣ ಎಂಬವರ ಜುವೆಲ್ಲರಿ ಅಂಗಡಿಗೆ ಅ.21ರಂದು ಸಂಜೆ ವೇಳೆ ಇಬ್ಬರು ಅಪರಿಚಿತ ಮಹಿಳೆಯರು ಗ್ರಾಹಕರಂತೆ ಬಂದು ಅಂಗಡಿಯ ಸಿಬ್ಬಂದಿಗಳೊಂದಿಗೆ ಮಾತನಾಡಿದರು. ಬಳಿಕ ಅವರ ಅರಿವಿಗೆ ಬಾರದಂತೆ 1,68,097ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿ ಕೊಂಡು ಹೋಗಿದ್ದಾರೆಂದು ದೂರಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.