ಅಪಾಯ ಲೆಕ್ಕಿಸದೆ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರಿಂದ ಸೆಲ್ಫಿ !

Update: 2026-08-23 21:24 IST

ಕುಂದಾಪುರ, ಆ.23: ಸಮುದ್ರ ಪ್ರಕ್ಷುಬ್ಧವಾಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಮರವಂತೆ ತ್ರಾಸಿ ಬೀಚ್ ನಲ್ಲಿ ಎಚ್ಚರಿಕೆ ಫಲಕವನ್ನು ಅಳವಡಿಸಿದ್ದರೂ, ಅದನ್ನು ಲೆಕ್ಕಿಸದೆ ಪ್ರವಾಸಿಗರು ಸಮುದ್ರದ ಅಂಚಿನಲ್ಲಿ ನಿಂತು ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ.

ಮರವಂತೆ ಬೀಚ್‌ನಲ್ಲಿ ಇತ್ತೀಚಿನ ದಿನಗಳಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದೆ. ಬಿರುಸಿನ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಅಪಾಯದ ಸೂಚನಾ ಫಲಕವನ್ನೂ ಪ್ರಮುಖ ಸ್ಥಳದಲ್ಲಿ ಅಳವಡಿಸಲಾಗಿದೆ.

ಆದರೆ ಕೆಲ ಪ್ರವಾಸಿಗರು ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಸಮುದ್ರದ ಅಂಚಿನವರೆಗೆ ತೆರಳಿ ಅಲೆಗಳ ನಡುವೆ ಫೋಟೋ ಹಾಗೂ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ.

ಅಲೆಗಳ ರಭಸ ಹೆಚ್ಚಾದ ಸಂದರ್ಭದಲ್ಲಿ ಕ್ಷಣಮಾತ್ರದಲ್ಲಿ ಸಮುದ್ರದೊಳಗೆ ಎಳೆದುಕೊಂಡು ಹೋಗುವ ಅಪಾಯವಿದ್ದು, ಇಂತಹ ಸಾಹಸ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆಯಿದೆ.

ಫೋಟೋ ಅಥವಾ ಸೆಲ್ಫಿಗಾಗಿ ಜೀವವನ್ನು ಅಪಾಯಕ್ಕೆ ಒಡ್ಡದಂತೆ ಪ್ರವಾಸಿಗರು ಎಚ್ಚರಿಕೆ ವಹಿಸಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News