Udupi | ಕೊಡವೂರು ಬಳಿ ನದಿಗೆ ಬಿದ್ದ ಕಾರು: ಚಾಲಕ, ಮಗುವಿನ ರಕ್ಷಣೆ
ಉಡುಪಿ : ಕೊಡವೂರು ಚೆನ್ನಂಗಡಿ ಸಮೀಪ ಕಾರೊಂದು ನದಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ರಕ್ಷಿಸಿದ ಘಟನೆ ನಡೆದಿದೆ.
ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಚೆನ್ನಂಗಡಿಯ ಮೀನುಗಾರ ಗಣೇಶ್ ಎಂಬವರು ತಕ್ಷಣ ನದಿಗೆ ಧುಮುಕಿದ್ದಾರೆ. ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರುವಲ್ಲಿ ಅವರು ಯಶಸ್ವಿಯಾಗಿದ್ದಾರೆ.
ಇಬ್ಬರ ಜೀವ ಉಳಿಸಿದ ಗಣೇಶ್ ಅವರ ಧೈರ್ಯ ಹಾಗೂ ಸಾಹಸಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.