ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌

Update: 2026-08-15 10:11 IST

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತಿ ಗೊಂಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್‌ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಪ್ರತಿನಿತ್ಯ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಲು ವಿ-ಕೇರ್ ಸೊಸೈಟಿ ಸಹಯೋಗದಲ್ಲಿ ವೈಜ್ಞಾನಿಕವಾಗಿ ಸಂಗ್ರಹಿಸಿ ಪರಿಸರ ಸ್ನೇಹಿ ಅಗರಬತ್ತಿ, ಬಿದುರು ರಹಿತ ದೂಪದಕಡ್ಡಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಯ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಕಾಲ್ಪನಿಕ ಮಾಸ್ಕಾಟ್‌ನ್ನು ಅನಾವರಣಗೊಳಿಸಿದ ಸಚಿವರು, ಉಡುಪಿ ಸುಗಂಧವನ್ನು ಬಿಡುಗಡೆಗೊಳಿಸಿದರು.

ಶಾಸಕ ಯಶಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ ಭಂಡಾರಿ, ಎಂ.ಎ.ಗಫೂರ್, ಅಶೋಕ್ ಕುಮಾರ್ ಕೊಡವೂರು, ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಎಸ್ಪಿ ಹರಿರಾಂ ಶಂಕರ್, ಸಿಇಒ ಪ್ರತೀಕ್ ಬಾಯಲ್ ಮುಂತಾದವರು ಉಪಸ್ಥಿತರಿದ್ದರು.

ಇದಕ್ಕೆ ಮುನ್ನ ಆಕರ್ಷಕ ಪಥಸಂಚಲನದಲ್ಲಿ ಗೌರವ ರಕ್ಷೆ ಸ್ವೀಕರಿಸಿದರು. ಜಿಲ್ಲೆಯ ಸಾಧಕರನ್ನು ಸನ್ಮಾನಿಸಿ ಕೊನೆಯಲ್ಲಿ ಉಡುಪಿ ಆಸುಪಾಸಿನ ಶಾಲಾ ವಿದ್ಯಾರ್ಥಿಗಳು ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ವೀಕ್ಷಿಸಿದರು.

 

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News