ಉಡುಪಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸನ್ಮಾನ
ಉಡುಪಿ, ಡಿ.6: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷೆ ಅನು ಸಿವರಾಮನ್ ಅವರನ್ನು ಶನಿವಾರ ಉಡುಪಿಯ ಪ್ರವಾಸಿ ಮಂದಿರದಲ್ಲಿ ಉಡುಪಿ ವಕೀಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣವರ್, ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ದೇವದಾಸ್ ವಿ.ಶೆಟ್ಟಿಗಾರ್, ಖಜಾಂಚಿ ಹಿಲ್ಡಾ ಕ್ಯಾಸ್ಟಲಿನೊ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ನಾಗರಾಜ್, ಗೀತಾ ಕೌಸಿಕ್, ಸಚಿನ್ ಶೆಟ್ಟಿ, ಗುರುಪ್ರಸಾದ್ ಜಿ.ಎಸ್., ದೀಪಕ್ ಕುಮಾರ್ ಪೂಜಾರಿ, ದೀಪಾ ಕೆ.ಶೆಟ್ಟಿ., ವಿನಯ ಸುವರ್ಣ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್ ಮತ್ತು ಮಂಗಳೂರಿನ ಜಿಲ್ಲಾ ಸರಕಾರಿ ವಕೀಲ ಎಂ.ಪಿ.ನೊರೋನಾ ಉಪಸ್ಥಿತರಿದ್ದರು.