×
Ad

ಉಡುಪಿ: ಹಲ್ಲೆ ನಡೆಸಿದ ಆರೋಪಿಗೆ ಜೈಲು ಶಿಕ್ಷೆ, ದಂಡ

Update: 2023-09-29 21:08 IST

ಉಡುಪಿ, ಸೆ.29: ಹಲ್ಲೆ ನಡೆಸಿದ ಆರೋಪಿಗೆ ನಗರದ ಹೆಚ್ಚುವರಿ ಸಿ.ಜೆ ಮತ್ತು ಎ.ಸಿ.ಜೆ.ಎಂ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2012ರ ಜುಲೈ 8ರಂದು ಸಂಜೆ 4:45ರ ಸುಮಾರಿಗೆ ಮಹಾದೇವಪ್ಪ ಎಂಬಾತ ಉಡುಪಿ ತಾಲೂಕು ನಂದಿಕೂರು ಗ್ರಾಮದ ಅಡ್ವೆ ಅಣ್ಣಾಜಿಗೋಳಿ ಎಂಬಲ್ಲಿರುವ ಅಡ್ವೆ ವಿಜಯ ರೈ ಅವರ ಬಾಬ್ತು ಹಂಚಿನ ಕಟ್ಟಡದಲ್ಲಿರುವ ಒಂದನೇ ಅಂತಸ್ತಿನ ಕೋಣೆಗೆ ಅಕ್ರಮ ಪ್ರವೇಶ ಮಾಡಿ, ಕೋಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಚೆನ್ನ ಅವರನ್ನು ಉದ್ದೇಶಿಸಿ, ಕೋಣೆಯಿಂದ ಹೊರಹೋಗುವಂತೆ ಹೇಳಿ, ಅವರ ಹೊಟ್ಟೆ ಹಾಗೂ ಬಲಕೈಬೆರಳಿಗೆ ಕತ್ತಿಯಿಂದ ಹೊಡೆದು ತೀವ್ರ ಸ್ವರೂಪದ ಗಾಯ ಉಂಟುಮಾಡಿರುವ ಹಿನ್ನೆಲೆಯಲ್ಲಿ ಪಡುಬಿದ್ರೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು, ಆರೋಪಿ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು, ಆರೋಪ ಸಾಬೀತಾದ ಕಾರಣ ನಗರದ ಹೆಚ್ಚುವರಿ ಸಿ.ಜೆ ಮತ್ತು ಎ.ಸಿ.ಜೆ.ಎಂ ನ್ಯಾಯಾಲಯದ ನ್ಯಾಯಾಧೀಶ ಪಿ.ಆರ್ ಯೋಗೀಶ್ ಅವರು ಆರೋಪಿ ಮಹಾದೇವಪ್ಪನಿಗೆ 6 ತಿಂಗಳುಗಳ ಜೈಲು ಶಿಕ್ಷೆ ಹಾಗೂ 10000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಹಿರಿಯ ಸಹಾಯಕ ಅಭಿಯೋಜಕ ಬದರೀನಾಥ್ ನಾಯರಿ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News