×
Ad

ಉಡುಪಿ: ಮೂಡುಬೆಳ್ಳೆ ಕಟ್ಟಿಂಗೇರಿಯಲ್ಲಿ ದುಷ್ಕರ್ಮಿಗಳಿಂದ ಶಿಲುಬೆ ಧ್ವಂಸ; ಪ್ರಕರಣ ದಾಖಲು

Update: 2025-02-22 09:01 IST

ಶಿರ್ವ: ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು  ಶಿಲುಬೆಯನ್ನು ದ್ವಂಸ ಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಗುಡ್ಡದ ಮೇಲಿರುವ ಈ ಶಿಲುಬೆಯನ್ನು ದ್ವಂಸಗೊಳಿಸಿರುವುದು ಫೆ.19ರಂದು ಬೆಳಕಿಗೆ ಬಂದಿದೆ. ಇದಕ್ಕಿಂತ 15 ದಿನಗಳ ಹಿಂದೆ ಇಲ್ಲಿ ಪೂಜೆ ಸಲ್ಲಿಸಲಾಗಿತ್ತು. ಆ ಬಳಿಕ ಇತ್ತ ಯಾರೂ ಕೂಡ ಹೋಗಿರಲಿಲ್ಲ.

ಫೆ.19 ರಂದು ಸ್ಥಳೀಯರು ಅಲ್ಲಿಗೆ ತೆರಳಿದಾಗ ದುಷ್ಕರ್ಮಿಗಳು ಶಿಲುಬೆಯನ್ನು ಮುರಿದು ಹಾನಿಗೊಳಿಸಿರುವುದು ಕಂಡುಬಂದಿದೆ. ಈ ಬಗ್ಗೆ ಫೆ. 21ರಂದು ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News