×
Ad

ಉಡುಪಿ: ಎನ್‌ಆರ್‌ಐ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶೇಖ್ ವಾಹಿದ್‌ಗೆ ಸನ್ಮಾನ

Update: 2023-08-12 22:09 IST

ಉಡುಪಿ: ಉಡುಪಿ ಜಿಲ್ಲಾ ಎನ್‌ಆರ್‌ಐ ಕಾಂಗ್ರೆಸ್‌ನ ಅಧ್ಯಕ್ಷ ಹಾಜಿ ಶೇಖ್ ವಾಹಿದ್ ಅವರಿಗೆ ಸನ್ಮಾನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಶನಿವಾರ ಉಡುಪಿ ಬ್ರಹ್ಮಗಿರಿಯಲ್ಲಿರುವ ಲಯನ್ಸ್ ಭವನದಲ್ಲಿ ಆಯೋಜಿಸ ಲಾಗಿತ್ತು.

ಈ ಸಂದರ್ಭದಲ್ಲಿ ಹಾಜೀ ಶೇಖ್ ವಾಹಿದ್ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಕುಶಾಲ್ ಶೆಟ್ಟಿ ಶುಭ ಹಾರೈಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ರಮೇಶ್ ಕಾಂಚನ್, ಹಾಲಿಮಾ ಸಬ್ಜು ಸಭಾಭವನದ ಮಾಲಕ ಹಾಜಿ ಜಲೀಲ್ ಸಾಹೇಬ್, ಉದ್ಯಮಿ ಮುಹಮ್ಮದ್ ಮೌಲಾ ಮಾತನಾಡಿದರು.

ಕಾಂಗ್ರೆಸ್ ಮುಖಂಡರಾದ ಅಣ್ಣಯ್ಯ ಶೇರಿಗಾರ್, ಜಯಕುಮಾರ್, ರೋಷನ್ ಶೆಟ್ಟಿ ಮತ್ತು ಹಾಜಿ ಶೇಖ್ ವಾಹಿದ್ ರವರ ಕುಟುಂಬಸ್ಥರು, ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು. ಉಡುಪಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾದ ಸತೀಶ್ ಮಂಚಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News