×
Ad

ಉಡುಪಿ: ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Update: 2025-01-26 15:16 IST

ಉಡುಪಿ, ಜ.26: ತೋನ್ಸೆ ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಕೆಮ್ಮಣ್ಣು ಪಡುತೋನ್ಸೆ ಗ್ರಾಮ ಪಂಚಾಯತ್ ಸದಸ್ಯ ವಿಜಯ ಪಡುಕುದ್ರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕಿ ಸುನಂದ ವಿಧ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಶಬೀನ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ದಿವ್ಯ ಪೈ, ಅರಬಿಕ್ ಕಾಲೇಜು ಪ್ರಾಂಶುಪಾಲೆ ಕುಲ್ಸುಮ್ ಅಬುಬಕರ್, ಮುಖ್ಯೋಪಾಧ್ಯಯಿನಿ ಅಲ್‌ಶಿ ಶೇಕ್, ಶಾದತ್ ಆಸಿ್‌ ಉಪಸ್ಥಿತರಿದ್ದರು. ಫಿಝ ಮರ್ಯಮ್ ಸ್ವಾಗತಿಸಿದರು. ಉಮ್ಮೆ ಹನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News