×
Ad

ಉಡುಪಿ | ಡಿ.17ರಂದು ವಿಶೇಷ ಉಪನ್ಯಾಸ

Update: 2025-12-15 22:14 IST

ಸಾಂದರ್ಭಿಕ ಚಿತ್ರ

ಉಡುಪಿ, ಡಿ.15: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಉಡುಪಿ ಜಿಲ್ಲೆ, ಉಡುಪಿ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜು ಇವುಗಳ ಸಹಯೋಗದೊಂದಿಗೆ ಕುವೆಂಪು ಅವರ ವಿಚಾರ ಸಾಹಿತ್ಯ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಡಿ.17ರಂದು ಅಪರಾಹ್ನ 1.30ಕ್ಕೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಅನಂತ ರಾಮ ನಾಯಕ್ ಉಪನ್ಯಾಸ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್ ವಹಿಸಲಿರುವರು. ಅಕಾಡೆಮಿ ಸದಸ್ಯ ಡಾ.ಜಯಪ್ರಕಾಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News