×
Ad

ಯುವಕ ಆತ್ಮಹತ್ಯೆ

Update: 2023-08-20 20:17 IST

ಬ್ರಹ್ಮಾವರ, ಆ.20: ಪ್ರೀತಿಸುತ್ತಿದ್ದ ಯುವತಿ ಮೃತಪಟ್ಟ ಚಿಂತೆಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ನೀಲಾವರ ಗ್ರಾಮದ ಬಾವಲಿಕುದ್ರು ನಿವಾಸಿ ಸುನೀತ ಜೆನಿಫರ್ ಡಿಸೋಜ ಎಂಬವರ ಮಗ ಸುಜಿತ್ ಡೇವಿಡ್ ಡಿಸೋಜ(21) ಎಂದು ಗುರುತಿಸಲಾಗಿದೆ. ಸಂತೆಕಟ್ಟೆ ಮಿಲಾಗ್ರಿಸ್ ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದು, ಅವರು ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರೆನ್ನಲಾಗಿದೆ. ಇದೇ ವಿಚಾರವಾಗಿ ಸುಜಿತ್ ಡೇವಿಡ್ ಡಿಸೋಜ ಮಾನಸಿಕವಾಗಿ ನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News