×
Ad

ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಭೂಮಿ ಕಂಪಿಸಿದ ಅನುಭವ

Update: 2024-12-01 18:30 IST

ಕಾರವಾರ: ಜಿಲ್ಲೆಯ ಶಿರಸಿ-ಸಿದ್ದಾಪುರದ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಜನರು ಆತಂಕಗೊಂಡ ಘಟನೆ ನಡೆದಿದೆ.

ರವಿವಾರ ಸಿದ್ದಾಪುರ ತಾಲೂಕಿನ ಹೆಗ್ಗರಣಿ, ಹೇರೂರು ಹಾಗೂ ಶಿರಸಿ ತಾಲೂಕಿನ ಸಂಪಖಂಡ, ಗೋಳಿಮಕ್ಕಿ, ಮತ್ತಿಘಟ್ಟಾ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಈ ಗ್ರಾಮಗಳ ವ್ಯಾಪ್ತಿಯ ಮನೆಯಲ್ಲಿದ್ದವರಿಗೆ ಏಕಾಏಕಿ ಮನೆಯ ವಸ್ತುಗಳು ಅಲುಗಾಡಿದ ಅನುಭವವಾಗಿದೆ. ಹಲವರಿಗೆ ಕುಳಿತ ಖುರ್ಚಿ, ಸೋಫಾ ಅಲುಗಾಡಿದ ಅನುಭವವಾಗಿದ್ದು, ಭೂಕಂಪನ ಉಂಟಾಗಿರಬಹುದೆಂದು ಮನೆಯಿಂದ ಹೊರಗೆ ಬಂದಿದ್ದಾರೆ. ಅಲ್ಲದೇ ಅಕ್ಕಪಕ್ಕದವರೂ ಸಹ ತಮಗೂ ಅದೇ ರೀತಿ ಅನುಭವ ಆಗಿದ್ದನ್ನು ಹೇಳಿಕೊಂಡಿದ್ದು ಜನರು ಆತಂಕಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News