×
Ad

ಶಿರಸಿ: ಕಾಂಗ್ರೆಸ್ ಮುಖಂಡ ಸೇರಿದಂತೆ ಆರು ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

Update: 2024-05-03 10:55 IST

ಕಾರವಾರ, ಮೇ 3: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕಾಂಗ್ರೆಸ್ ಮುಖಂಡ ಸಹಿತ ಆರು ಉದ್ಯಮಿಗಳ ಮನೆಗಳ ಮೇಲೆ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ದಾಳಿ ನಡೆಸಿದೆ.

ಚುನಾವಣೆಗೆ ಕೆಲವೇ ದಿನ ಬಾಕಿ ಇದ್ದಾಗಲೇ ಕೆಪಿಸಿಸಿ ಸದಸ್ಯ ಹಾಗೂ ಉದ್ಯಮಿ ದೀಪಕ್ ದೊಡ್ಡರು, ಉದ್ಯಮಿಗಳಾದ ಶಿವರಾಮ ಹೆಗಡೆ, ಅನಿಲ್ ಕುಮಾರ್ ಮುಷ್ಟಗಿ, ರವೀಶ್ ಹೆಗಡೆ ಸೇರಿದಂತೆ ಒಟ್ಟು ಆರು ಮಂದಿಯ ಮನೆಗಳ ಹಾಗೂ ಅವರಿಗೆ ಸೇರಿದ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹುಬ್ಬಳ್ಳಿಯಿಂದ ಮೂರು ಕಾರುಗಳಲ್ಲಿ ಬಂದಿರುವ ಅಧಿಕಾರಿಗಳ ತಂಡವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕಾರವಾರ, ಮಂಗಳೂರು, ಹುಬ್ಬಳ್ಳಿಯಿಂದ ಅಧಿಕಾರಿಗಳ ತಂಡ ಆಗಮಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News